ನವದೆಹಲಿ : ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳು ಸೋಮವಾರ ಒಂದೇ ದಿನ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ₹ 3,200 ಕೋಟಿ ಮೊತ್ತದ ಸಾಲ ಮಂಜೂರು ಮಾಡಿವೆ.
ಕೋವಿಡ್ನಿಂದ ತೀವ್ರವಾಗಿ ಬಾಧಿತವಾಗಿರುವ ‘ಎಂಎಸ್ಎಂಇ‘ ವಲಯಕ್ಕೆ ಕೇಂದ್ರ ಸರ್ಕಾರ ಪ್ರಕಟಿಸಿರುವ ₹ 3 ಲಕ್ಷ ಕೋಟಿ ಮೊತ್ತದ ತುರ್ತು ಸಾಲ ಖಾತರಿ ಯೋಜನೆಯಡಿ ಈ ಸಾಲ ಮಂಜೂರು ಮಾಡಲಾಗಿದೆ.
ಸೋಮವಾರ ಒಂದೇ ದಿನ ಸಣ್ಣ ಕೈಗಾರಿಕೆಗಳಿಗೆ ಜಾಮೀನು ರಹಿತ ₹ 3,200 ಕೋಟಿ ಮೊತ್ತದ ಸಾಲ ಮಂಜೂರು ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.
ಎರಡನೇ ಹಂತದ 3 ಸಾವಿರಕ್ಕೂ ಹೆಚ್ಚು ಪಟ್ಟಣಗಳಲ್ಲಿನ ‘ಎಂಎಸ್ಎಂಇ’ಗಳಿಗೆ ಸಾಲ ಮಂಜೂರು ಮಾಡಲಾಗಿದೆ. ಈ ಸಾಲವನ್ನು ಕೈಗಾರಿಕಾ ಘಟಕಗಳು ವೇತನ, ಬಾಡಿಗೆ ಪಾವತಿ ಮತ್ತು ತಯಾರಿಕಾ ಚಟುವಟಿಕೆ ಪುನರಾರಂಭ ವೆಚ್ಚಕ್ಕೆ ಬಳಸಬಹುದಾಗಿದೆ. ಈ ಸಾಲಕ್ಕೆ ಶೇ 9.25 ಬಡ್ಡಿ ದರ ನಿಗದಿಪಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.