ಮುಂಬೈ: ಖ್ಯಾತ ಉದ್ಯಮಿ ಹಾಗೂ ಟಾಟಾ ಸನ್ಸ್ನ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರದಿಂದ ಉದ್ಯೋಗ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಏಕನಾಥ್ ಶಿಂದೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್, ಅಜಿತ್ ಪವಾರ್, ಕೈಗಾರಿಕಾ ಸಚಿವ ಉದಯ್ ಸಾಮಂತ್ ಹಾಗೂ ಇತರ ಸಚಿವರು ಮುಂಬೈನ ರತನ್ ಟಾಟಾ ಅವರ ನಿವಾಸಕ್ಕೆ ತೆರಳಿ ಸರಳ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
ಅನಾರೋಗ್ಯದ ಕಾರಣ ರತನ್ ಟಾಟಾ ಅವರು ವರ್ಣರಂಜಿತ ಕಾರ್ಯಕ್ರಮ ಬೇಡ ಎಂದಿದ್ದರು.
ಉದ್ಯಮಿಗಳನ್ನು ಸನ್ಮಾನಿಸುವ ಕಾರ್ಯಕ್ರಮದ ಅಂಗವಾಗಿ ಮಹಾರಾಷ್ಟ್ರ ಸರ್ಕಾರ ಉದ್ಯೋಗ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, ಇದು ಮೊದಲ ಪ್ರಶಸ್ತಿಯಾಗಿದೆ.
ಕಾರ್ಯಕ್ರಮದ ವೇಳೆ ರತನ್ ಟಾಟಾ ಅವರು ಮಹಾರಾಷ್ಟ್ರ ಸರ್ಕಾರದ ಔದ್ಯಮಿಕ ಬೆಳವಣಿಗೆ ಕುರಿತು ಕೆಲಹೊತ್ತು ಚರ್ಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.