ಮುಂಬೈ: ರೆಪೊ ದರ ಏರಿಕೆಯು ಅಚ್ಚರಿ ಮೂಡಿಸಿಲ್ಲ, ಆದರೆ ದರ ಏರಿಕೆ ಮಾಡಿದ ಸಮಯವು ಅನಿರೀಕ್ಷಿತವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಣಕಾಸು ನೀತಿ ಸಮಿತಿಯ ಎರಡು ಸಭೆಗಳ ನಡುವೆ ಬಡ್ಡಿದರ ಏರಿಕೆ ನಿರ್ಧಾರ ತೆಗೆದುಕೊಂಡಿರುವುದು ಅಚ್ಚರಿ ಮೂಡಿಸಿದೆ ಎಂದಿದ್ದಾರೆ.
ಬಡ್ಡಿದರ ಏರಿಕೆಯು ಸರ್ಕಾರದ ಉದ್ದೇಶಿತ ಮೂಲಸೌಕರ್ಯ ಹೂಡಿಕೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದೂ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.