ADVERTISEMENT

ಧನಲಕ್ಷ್ಮಿ ಬ್ಯಾಂಕ್‌ಗೆ ನಿರ್ದೇಶಕರನ್ನು ನೇಮಿಸಿದ ಆರ್‌ಬಿಐ

ಪಿಟಿಐ
Published 29 ಸೆಪ್ಟೆಂಬರ್ 2020, 20:44 IST
Last Updated 29 ಸೆಪ್ಟೆಂಬರ್ 2020, 20:44 IST
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ   

ನವದೆಹಲಿ: ಖಾಸಗಿ ವಲಯದ ಧನಲಕ್ಷ್ಮಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಹೆಚ್ಚುವರಿ ನಿರ್ದೇಶಕರ
ನ್ನಾಗಿ ಡಿ.ಕೆ. ಕಶ್ಯಪ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಎರಡು ವರ್ಷಗಳ ಅವಧಿಗೆ ನೇಮಕ ಮಾಡಿದೆ. ಆದರೆ, ಯಾವ ಕಾರಣಕ್ಕಾಗಿ ಅವರನ್ನು ಆರ್‌ಬಿಐ ನೇಮಕ ಮಾಡಿದೆ ಎಂಬುದನ್ನು ಧನಲಕ್ಷ್ಮಿ ಬ್ಯಾಂಕ್ ತಿಳಿಸಿಲ್ಲ.

ಕಶ್ಯಪ್ ಅವರು ಆರ್‌ಬಿಐನ ಬೆಂಗಳೂರು ಪ್ರಾದೇಶಿಕ ಕಚೇರಿಯ ಮಹಾ ಪ್ರಬಂಧಕ. ಆರ್‌ಬಿಐ ಸಾಮಾನ್ಯ ಸಂದರ್ಭಗಳಲ್ಲಿ ಖಾಸಗಿ ಬ್ಯಾಂಕುಗಳ ಆಡಳಿತ ಮಂಡಳಿಗೆ ತನ್ನ ಕಡೆಯಿಂದ ನಿರ್ದೇಶಕರನ್ನು ನೇಮಕ ಮಾಡುವುದಿಲ್ಲ. ಧನಲಕ್ಷ್ಮಿ ಬ್ಯಾಂಕ್‌ನಲ್ಲಿನ ಕೆಲವು ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಬ್ಯಾಂಕ್‌ ನೌಕರರ ಒಕ್ಕೂಟಗಳು, ಆರ್‌ಬಿಐ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT