ನವದೆಹಲಿ: ಕೋಟಕ್ ಮಹೀಂದ್ರ ಬ್ಯಾಂಕ್ಗೆ ಮಧ್ಯಂತರ ಅವಧಿಗೆ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಆಗಿ ದೀಪಕ್ ಗುಪ್ತ ಅವರನ್ನು ನೇಮಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಒಪ್ಪಿಗೆ ನೀಡಿದೆ.
ಉದಯ್ ಕೋಟಕ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ನೇಮಕ ನಡೆದಿದೆ.
ಗುಪ್ತ ಅವರ ನೇಮಕವು ಸೆಪ್ಟೆಂಬರ್ 2ರಿಂದ ಜಾರಿಗೆ ಬರುವಂತೆ ಎರಡು ತಿಂಗಳ ಅವಧಿಗೆ ಇರಲಿದೆ ಎಂದು ಆರ್ಬಿಐ ಗುರುವಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಕೋಟಕ್ ಮಹೀಂದ್ರ ಬ್ಯಾಂಕ್ ಷೇರುಪೇಟೆಗೆ ಮಾಹಿತಿ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.