ADVERTISEMENT

ಬಡ್ಡಿದರ ಕಡಿತಕ್ಕೆ ಅವಕಾಶ ಇದೆ: ಶಕ್ತಿಕಾಂತ್‌ ದಾಸ್‌

ಪಿಟಿಐ
Published 19 ಸೆಪ್ಟೆಂಬರ್ 2019, 19:36 IST
Last Updated 19 ಸೆಪ್ಟೆಂಬರ್ 2019, 19:36 IST
ಶಕ್ತಿಕಾಂತ್‌ ದಾಸ್‌
ಶಕ್ತಿಕಾಂತ್‌ ದಾಸ್‌   

ಮುಂಬೈ: ‘ಬಡ್ಡಿದರದಲ್ಲಿ ಇಳಿಕೆ ಮಾಡಲು ಅವಕಾಶ ಇದೆ’ ಎಂದುಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ.

ಹಣದುಬ್ಬರ ಶೇ 4ಕ್ಕಿಂತಲೂ ಕೆಳಮಟ್ಟದಲ್ಲಿದೆ. ಮುಂದಿನ ಒಂದು ವರ್ಷದಲ್ಲಿಯೂ ಮುಂದುವರಿಯುವ ನಿರೀಕ್ಷೆ ಇದೆ. ಬೆಲೆಯಲ್ಲಿಯೂ ಸ್ಥಿರತೆ ಇದೆ. ಆರ್ಥಿಕ ಪ್ರಗತಿ ಮಂದಗತಿಯಲ್ಲಿ ಇರುವಂತಹ ಸ್ಥಿತಿಯಲ್ಲಿ ಬಡ್ಡಿದರ ಕಡಿತಕ್ಕೆ ಅವಕಾಶ ಇದೆ ಎಂದಿದ್ದಾರೆ.

ಬ್ಲೂಮ್‌ಬರ್ಗ್‌ಭಾರತ ಆರ್ಥಿಕ ಶೃಂಗದಲ್ಲಿ ಮಾತನಾಡಿದ ಅವರು, ‘ಸೌದಿ ಅರೇಬಿಯಾದ ತೈಲ ಬಿಕ್ಕಟ್ಟು ಭಾರತದ ಹಣದುಬ್ಬರದ ಮೇಲೆ ಹೆಚ್ಚಿನ ಪರಿಣಾಮಬಿರುವುದಿಲ್ಲ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.