ADVERTISEMENT

ಕೇಂದ್ರ ಸರ್ಕಾರ–ಆರ್‌ಬಿಐ ಬಿಕ್ಕಟ್ಟು ಉಲ್ಬಣ: ಊರ್ಜಿತ್ ಪಟೇಲ್ ರಾಜೀನಾಮೆ ಸಾಧ್ಯತೆ

ಏಜೆನ್ಸೀಸ್
Published 31 ಅಕ್ಟೋಬರ್ 2018, 5:11 IST
Last Updated 31 ಅಕ್ಟೋಬರ್ 2018, 5:11 IST
   

ಮುಂಬೈ: ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್‌ ಇಂಡಿಯಾ (ಆರ್‌ಬಿಐ) ನಡುವಣ ಬಿಕ್ಕಟ್ಟು ಉಲ್ಬಣಿಸಿರುವ ಬೆನ್ನಲ್ಲೇ ಗವರ್ನರ್ ಹುದ್ದೆಗೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಮತ್ತು ಸರ್ಕಾರದ ನಡುವೆ ಕಳೆದ ಕೆಲ ದಿನಗಳಿಂದ ಸರಿಪಡಿಸಲಾರದಂತಹ ಬಿಕ್ಕಟ್ಟು ಉದ್ಭವಿಸಿದೆ. ಪಟೇಲ್ ಅವರು ರಾಜೀನಾಮೆ ನೀಡುವ ಎಲ್ಲ ಸಾಧ್ಯತೆಗಳೂ ಮುಕ್ತವಾಗಿವೆ ಎಂದು ಸಿಎನ್‌ಬಿಸಿ ಟಿವಿ18 ವರದಿ ಮಾಡಿದೆ.

ADVERTISEMENT

ಈ ಕುರಿತು ಆರ್‌ಬಿಐ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.