ಬೆಂಗಳೂರು: ಅಕ್ಕಪಕ್ಕದ ರಾಜ್ಯಗಳ ಕೈಗಾರಿಕೋದ್ಯಮಿಗಳನ್ನು ಸೆಳೆಯಲು ತಮಿಳುನಾಡು ಹಾಗೂ ಕೇರಳದಲ್ಲಿ ಶೀಘ್ರ ರೋಡ್ ಷೋ ನಡೆಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.
ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಅನಿಲ್ ಚಿಕ್ಕಮಾದು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಎರಡನೇ ಹಾಗೂ ಮೂರನೇ ಹಂತದ ನಗರಗಳಿಗೆ ಕೈಗಾರಿಕೋದ್ಯಮಿಗಳನ್ನು ಸೆಳೆಯಲಾಗುತ್ತಿದೆ. ಐದು ವರ್ಷಗಳಲ್ಲಿ 20 ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಜಿಸಲು ಉದ್ದೇಶಿಸಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.