ADVERTISEMENT

ಹೂಡಿಕೆದಾರರನ್ನು ಆಮಂತ್ರಿಸಿದ ಶಿವರಾಜ್ ಸಿಂಗ್

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 15:20 IST
Last Updated 24 ನವೆಂಬರ್ 2022, 15:20 IST
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್   

ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೈಗಾರಿಕೆಗಳಿಗೆ ಅಗತ್ಯ ಪ್ರಮಾಣದಲ್ಲಿ ಜಮೀನು ಲಭ್ಯವಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಹೇಳಿದರು.

ಇಂದೋರ್‌ನಲ್ಲಿ ಜನವರಿಯಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಉದ್ಯಮಿಗಳ ಜೊತೆ ಚರ್ಚಿಸಲು ಅವರು ಬೆಂಗಳೂರಿಗೆ ಬಂದಿದ್ದರು. ಉದ್ಯಮಿಗಳಿಗೆ ಅಗತ್ಯವಿರುವ ಪ್ರಮಾಣದಲ್ಲಿ ನೀರು ಹಾಗೂ ವಿದ್ಯುತ್‌ ಕೂಡ ರಾಜ್ಯದಲ್ಲಿ ಲಭ್ಯವಿದೆ ಎಂದು ಅವರು ಮಾಹಿತಿ ನೀಡಿದರು.

‘ಕೈಗಾರಿಕೆಗಳ ಅಗತ್ಯಕ್ಕೆ ಅನುಗುಣವಾಗಿ ನೀತಿಗಳಲ್ಲಿ ಸೂಕ್ತ ಬದಲಾವಣೆ ತರಲು ಸರ್ಕಾರ ಒಪ್ಪುತ್ತದೆ’ ಎಂದು ಅವರು ಭರವಸೆ ನೀಡಿದರು. ಉದ್ಯಮಿಗಳು, ಹೂಡಿಕೆದಾರರು ಸಮಾವೇಶಕ್ಕೆ ಬರಬೇಕು ಎಂದು ಆಹ್ವಾನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.