ADVERTISEMENT

ಸಂಕಷ್ಟದಲ್ಲಿರುವ ದೇಶಗಳ ನೆರವಿಗೆ ಸಂಘಟಿತ ಯತ್ನ ಅಗತ್ಯ: ನಿರ್ಮಲಾ ಸೀತಾರಾಮನ್‌

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2023, 21:45 IST
Last Updated 25 ಫೆಬ್ರುವರಿ 2023, 21:45 IST
   

ಬೆಂಗಳೂರು: ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಹಣಕಾಸಿನ ಅಗತ್ಯಗಳನ್ನು ಈಡೇರಿಸಲು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌), ವಿಶ್ವ ಬ್ಯಾಂಕ್‌ ತರಹದ ಹಲವು ಸಂಸ್ಥೆಗಳ ಜೊತೆಗೂಡಿ ಕೆಲಸ ಮಾಡುವ ಅಗತ್ಯ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಎರಡು ದಿನ ಗಳವರೆಗೆ ನಡೆದ ಜಿ20 ಸದಸ್ಯ ರಾಷ್ಟ್ರಗಳ ಹಣಕಾಸು ಸಚಿವರ ಸಭೆಯ ಬಳಿಕ ಅವರು ಸುದ್ದಿ
ಗಾರರೊಂದಿಗೆ ಮಾತನಾಡಿದರು.

ಬಡರಾಷ್ಟ್ರಗಳ ಸಾಲದ ಸಮಸ್ಯೆ ಬಗೆಹರಿಸುವುದು ಸೇರಿದಂತೆ, ಡಿಜಿಟಲ್‌ ಕರೆನ್ಸಿ, ಹವಾಮಾನ ಬದಲಾವಣೆ ಮತ್ತು ವಿತ್ತೀಯ ಒಳಗೊಳ್ಳುವಿಕೆ ವಿಷಯಗಳ ಮೇಲೆ ಎವಿಸ್ತೃತವಾದ ಚರ್ಚೆ ನಡೆಯಿತು ಎಂದರು.

ಜಾಂಬಿಯಾ, ಈಥೋಪಿಯಾ, ಘಾನಾ ಮತ್ತು ಶ್ರೀಲಂಕಾದಲ್ಲಿ ಸಾಲ ಮರುಹೊಂದಾಣಿಕೆ ಮಾಡುತ್ತಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಿದ ಅವರು, ಕಡಿಮೆ ಮತ್ತು ಮಧ್ಯಮ ಆದಾಯ ಇರುವ ದೇಶಗಳು ಎದುರಿಸುತ್ತಿರುವ ಸಾಲದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.