ಮಂಗಳೂರು: ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ (ಕೆಐಒಸಿಎಲ್) ಪ್ರಭಾರ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾಗಿ (ಸಿಎಂಡಿ) ಹಣಕಾಸು ನಿರ್ದೇಶಕ ಸ್ವಪ್ನಕುಮಾರ್ ಗೊರೈ ಅವರನ್ನು ನೇಮಿಸಲಾಗಿದೆ. ಹಾಲಿ ಸಿಎಂಡಿ ಎಂ.ವಿ. ಸುಬ್ಬರಾವ್ ಅವರು ಜೂನ್ 30ರಂದು ನಿವೃತ್ತರಾಗಿದ್ದು, ಅವರ ಜಾಗಕ್ಕೆ ಈ ನೇಮಕ ಮಾಡಲಾಗಿದೆ.
ಲೆಕ್ಕಪರಿಶೋಧಕರಾಗಿರುವ ಗೊರೈ, ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಸುಮಾರು 33 ವರ್ಷಗಳ ಸೇವಾ ಅನುಭವ ಹೊಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.