ನವದೆಹಲಿ: ಕೇಂದ್ರ ಸರ್ಕಾರವುಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರವನ್ನು ಶೇ 0.1ರಷ್ಟು ಕಡಿತ ಮಾಡಿದೆ.
2019–20ನೇ ಹಣಕಾಸು ವರ್ಷದಜುಲೈ–ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಈ ಬಡ್ಡಿದರವು ಅನ್ವಯಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಪರಾಮರ್ಶಿಸುವ ವ್ಯವಸ್ಥೆ ಜಾರಿಯಲ್ಲಿ ಇದೆ.
ಉಳಿತಾಯ ಠೇವಣಿಗಳ ಮೇಲಿನ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಶೇ 4ರಷ್ಟನ್ನೇ ಉಳಿಸಿಕೊಳ್ಳಲಾಗಿದೆ.
ಕಿಸಾನ್ ವಿಕಾಸ ಪತ್ರದ (ಕೆವಿಪಿ) ಮುಕ್ತಾಯದ ಅವಧಿಯನ್ನು 112 ತಿಂಗಳಿನಿಂದ 113 ತಿಂಗಳಿಗೆ ಹೆಚ್ಚಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.