ADVERTISEMENT

ಬೆಂಗಳೂರು: ಆನಂದ ಸಂಕೇಶ್ವರಗೆ ‘ಸೌತ್​ ಇಂಡಿಯಾ ಬ್ಯುಸಿನೆಸ್’​ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 15:23 IST
Last Updated 21 ಸೆಪ್ಟೆಂಬರ್ 2025, 15:23 IST
ದುಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಯುಎಇ ರಾಯಭಾರಿ ಆಗಿದ್ದ ಅಹ್ಮದ್​ ಅಬ್ದುಲ್​ ರೆಹಮಾನ್​ ಅಲ್ಬನ್ನಾ ಅವರು ‘ಸೌತ್​ ಇಂಡಿಯಾ ಬ್ಯುಸಿನೆಸ್​ ಪ್ರಶಸ್ತಿ’ಯನ್ನು ಆನಂದ ಸಂಕೇಶ್ವರ ಅವರಿಗೆ ಪ್ರದಾನ ಮಾಡಿದರು
ದುಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಯುಎಇ ರಾಯಭಾರಿ ಆಗಿದ್ದ ಅಹ್ಮದ್​ ಅಬ್ದುಲ್​ ರೆಹಮಾನ್​ ಅಲ್ಬನ್ನಾ ಅವರು ‘ಸೌತ್​ ಇಂಡಿಯಾ ಬ್ಯುಸಿನೆಸ್​ ಪ್ರಶಸ್ತಿ’ಯನ್ನು ಆನಂದ ಸಂಕೇಶ್ವರ ಅವರಿಗೆ ಪ್ರದಾನ ಮಾಡಿದರು   

ಬೆಂಗಳೂರು: ವಿಆರ್​ಎಲ್​ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ‘ಸೌತ್​ ಇಂಡಿಯಾ ಬ್ಯುಸಿನೆಸ್​ ಪ್ರಶಸ್ತಿ’ (ಎಸ್​ಐಬಿಎ)​ ಸಂದಿದೆ.

ದುಬೈನಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಯುಎಇ ರಾಯಭಾರಿ ಆಗಿದ್ದ ಅಹ್ಮದ್​ ಅಬ್ದುಲ್​ ರೆಹಮಾನ್​ ಅಲ್ಬನ್ನಾ ಅವರು ಆನಂದ ಸಂಕೇಶ್ವರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉದ್ಯಮ, ಸಂಸ್ಕೃತಿ ಮತ್ತು ವಾಣಿಜ್ಯ ವಲಯದಲ್ಲಿ ಜಾಗತಿಕವಾಗಿ ಪ್ರಭಾವ ಬೀರಿರುವವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. 

ADVERTISEMENT

ವಿಆರ್​ಎಲ್​ ಸಂಸ್ಥೆಯನ್ನು ದೇಶದ ದೊಡ್ಡ ಸಾರಿಗೆ ಕಂಪನಿಯಾಗಿ, ಕಾರ್ಯಾಚರಣೆ ದಕ್ಷತೆಯಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಬೆಳೆಸುವಲ್ಲಿ ಆನಂದ ಸಂಕೇಶ್ವರ ಕೊಡುಗೆ ನೀಡಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರು ಹೇಳಿರುವುದಾಗಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.