ADVERTISEMENT

ಪ್ರಗತಿಗೆ ರಾಜ್ಯಗಳೇ ಚಾಲಕ ಶಕ್ತಿ: ನೀತಿ ಆಯೋಗದ ಸಿಇಒ ಅಮಿತಾಬ್‌ ಕಾಂತ್

ನೀತಿ ಆಯೋಗದ ಸಿಇಒ ಅಮಿತಾಬ್‌ ಕಾಂತ್‌ ಅಭಿಪ್ರಾಯ

ಪಿಟಿಐ
Published 7 ಸೆಪ್ಟೆಂಬರ್ 2019, 20:00 IST
Last Updated 7 ಸೆಪ್ಟೆಂಬರ್ 2019, 20:00 IST
   

ನವದೆಹಲಿ (ಪಿಟಿಐ): ‘ದೇಶದ ಆರ್ಥಿಕತೆಯ ಗಾತ್ರವನ್ನು ₹ 350 ಲಕ್ಷ ಕೋಟಿಗೆ ತಲುಪಿಸಲು ರಾಜ್ಯಗಳು ಚಾಲಕ ಶಕ್ತಿಯಾಗಿ ಕಾರ್ಯನಿರ್ವಹಿಸಬೇಕಿದೆ’ ಎಂದು ನೀತಿ ಆಯೋಗದ ಸಿಇಒ ಅಮಿತಾಬ್‌ ಕಾಂತ್ ಹೇಳಿದ್ದಾರೆ.

ಪಿಎಚ್‌ಡಿ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಲು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಮತ್ತು ಪರಸ್ಪರ ಕಲಿಕಾ ಮನೋಧರ್ಮ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.

‘ಕೃಷಿ ಮತ್ತು ಕಾರ್ಮಿಕ ವಲಯಗಳಲ್ಲಿ ಸಾಂಸ್ಥಿಕ ಸುಧಾರಣೆಯ ಆದರೆ ಜಿಡಿಪಿ ಬೆಳವಣಿಗೆ ದರದಲ್ಲಿಯೂ ಏರಿಕೆ ಸಾಧ್ಯ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.