ADVERTISEMENT

ಶೀಘ್ರ ಸೂರ್ಯಕಾಂತಿ ಖರೀದಿ ಆರಂಭ

​ಪ್ರಜಾವಾಣಿ ವಾರ್ತೆ
Published 16 ಮೇ 2025, 13:58 IST
Last Updated 16 ಮೇ 2025, 13:58 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಸೂರ್ಯಕಾಂತಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ.

ಪ್ರತಿ ಕ್ವಿಂಟಲ್‌ ಸೂರ್ಯಕಾಂತಿಗೆ ₹7,280 ದರ ನಿಗದಿಪಡಿಸಲಾಗಿದೆ. ಶೀಘ್ರವೇ, ಖರೀದಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಬಾಗಲಕೋಟ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದು ಹೇಳಿದ್ದಾರೆ.

ADVERTISEMENT

ಕೇಂದ್ರ ಸರ್ಕಾರವು ನಾಫೆಡ್‌, ಎನ್‌ಸಿಸಿಎಫ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿಯನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಿದೆ. ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರ ಆರಂಭಿಸಲು ಆಯಾ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಕಾರ್ಯಪಡೆ ಸಮಿತಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿ ಎಕರೆಗೆ 4 ಕ್ವಿಂಟಲ್‌ನಂತೆ (ಗರಿಷ್ಠ 20 ಕ್ವಿಂಟಲ್‌) ಖರೀದಿಸಲಾಗುವುದು. ಖರೀದಿ ಪ್ರಕ್ರಿಯೆ ಆದೇಶ ಹೊರಡಿಸಿದ ದಿನದಿಂದ 90 ದಿನದವರೆಗೆ ಖರೀದಿ ನಡೆಯಲಿದೆ. ಪ್ಯಾಕ್ಸ್‌, ಎಫ್‌ಪಿಒ ಮತ್ತು ಟಿಎಪಿಸಿಎಂಎಸ್‌ನಲ್ಲಿ ರೈತರು ತಮ್ಮ ಎಫ್‌ಐಡಿ ಸಂಖ್ಯೆ ನೀಡಿ ಹೆಸರು ನೋಂದಣಿ ಮಾಡಿಸಿಕೊಂಡು, ಸೂರ್ಯಕಾಂತಿಯನ್ನು ಮಾರಾಟ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.