ಮಂಗಳೂರು: ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಯಾಗಿರುವುದರಿಂದ ಮೇ 11ರಿಂದ ಮೇ15ರವರೆಗೆ ಎರಡೂ ರಾಜ್ಯಗಳಲ್ಲಿ ಎಲ್ಲ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕ್ಯಾಂಪ್ಕೊ ನಿರ್ಧರಿಸಿದೆ.
ಕ್ಯಾಂಪ್ಕೊ ಶಾಖೆಗಳಲ್ಲಿ ಸರಕು ಖರೀದಿ, ವಹಿವಾಟುಗಳು ನಡೆಯುವುದಿಲ್ಲ. ನಿರ್ಬಂಧಗಳ ಸಡಿಲಿಕೆ ಅನುಗುಣವಾಗಿ ಖರೀದಿ ಪ್ರಕ್ರಿಯೆಯನ್ನು ಪುನರಾರಂಭಿಸುವ ಪ್ರಯತ್ನಗಳನ್ನು ಸಂಸ್ಥೆ ಮಾಡಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.