ನವದೆಹಲಿ: ಕೋಟಕ್ ಮಹೀಂದ್ರ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸ್ಥಾನಕ್ಕೆ ಉದಯ್ ಕೋಟಕ್ ಅವರು ರಾಜೀನಾಮೆ ನೀಡಿದ್ದಾರೆ. ಈ ಕುರಿತು ಬ್ಯಾಂಕ್ ಷೇರುಪೇಟೆಗೆ ಶನಿವಾರ ಮಾಹಿತಿ ನೀಡಿದೆ.
ಅವರ ರಾಜೀನಾಮೆಗೆ ಕಾರಣ ತಿಳಿಸಿಲ್ಲ. ಇಂದಿನಿಂದಲೇ ಅವರು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.
ಉದಯ್ ಕೋಟಕ್ ಅವರು ಬ್ಯಾಂಕ್ನ ನಾನ್ ಎಕ್ಸಿಕ್ಯೂಟಿವ್ ನಿರ್ದೇಶಕರಾಗಿ ಮುಂದುವರಿಯುತ್ತಾರೆ ಎಂದು ಬ್ಯಾಂಕ್ ಹೇಳಿದೆ
ಸದ್ಯ ಬ್ಯಾಂಕ್ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ದೀಪಕ್ ಗುಪ್ತಾ ಅವರು ಡಿಸೆಂಬರ್ 31ರವರೆಗೆ ಸಿಇಒ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಆದರೆ, ಇದು ಆರ್ಬಿಐ ಒಪ್ಪಿಗೆಗೆ ಒಳಪಟ್ಟಿರಲಿದೆ ಎಂದು ಬ್ಯಾಂಕ್ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.