ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 8 ಕೋಟಿ ಫಲಾನುಭವಿಗಳಿಗೆಏಪ್ರಿಲ್ನಿಂದ ಮೇ 15ರವರೆಗೆ 6.8 ಕೋಟಿ ಎಲ್ಪಿಜಿ ಸಿಲಿಂಡರ್ ವಿತರಿಸಲಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಕೊಡುಗೆಯಲ್ಲಿ ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರಿಗೆ ಕೇಂದ್ರ ಸರ್ಕಾರವು ಏಪ್ರಿಲ್–ಜೂನ್ ಅವಧಿಗೆ 14.2 ಕೆ.ಜಿಯ ಮೂರು ಎಲ್ಪಿಜಿ ಸಿಲಿಂಡರ್ ಉಚಿತವಾಗಿ ನೀಡಲಿದೆ.
ಸಿಲಿಂಡರ್ ಖರೀದಿ ವೆಚ್ಚ ಭರಿಸಲು ಚಿಲ್ಲರೆ ಮಾರಾಟದ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಹಣ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಬಗ್ಗೆ ಗ್ರಾಹಕರು ದೃಢೀಕರಣದ ಎಸ್ಎಂಎಸ್ ಪಡೆಯಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.