ಮಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದಿಂದ ವಾರ್ಷಿಕ 12.5 ಲಕ್ಷ ಟನ್ ಸಾಮರ್ಥ್ಯದ ಯೂರಿಯಾ ರಸಗೊಬ್ಬರ ಉತ್ಪಾದನಾ ಕಾರ್ಖಾನೆ ಸ್ಥಾಪಿಸುವ ಪ್ರಸ್ತಾವವಿದೆ ಎಂದು ಮಹಾಮಂಡಳದ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ರಾಜ್ಯಕ್ಕೆ ವಾರ್ಷಿಕ 15 ಲಕ್ಷ ಟನ್ ಯೂರಿಯಾ ರಸಗೊಬ್ಬರ ಬೇಕಿದೆ. ಮಂಗಳೂರು ಕೆಮಿಕಲ್ ಅಂಡ್ ಫರ್ಟಿಲೈಸರ್ಸ್ನಲ್ಲಿ (ಎಂಸಿಎಫ್) ವಾರ್ಷಿಕ 4.5 ಲಕ್ಷ ಟನ್ ಉತ್ಪಾದನೆ ಆಗುತ್ತಿದೆ. ಸಂಪೂರ್ಣ ಬೇಡಿಕೆಯನ್ನು ಪೂರೈಸಲು ಮಹಾಮಂಡಳದಿಂದ ಗೊಬ್ಬರ ಕಾರ್ಖಾನೆ ಆರಂಭಿಸಲು ಯೋಚಿಸಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.