ಬೆಂಗಳೂರು: ಚಿನ್ನಾಭರಣ ಉದ್ಯಮದಲ್ಲಿ ಭಾರತ ಮತ್ತು ಜಾಗತಿಕ ಮಟ್ಟದಲ್ಲಿ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಜೋಯಾಲುಕ್ಕಾಸ್ ಸಮೂಹದ ಅಧ್ಯಕ್ಷ ಜೋಯ್ ಅಲುಕ್ಕಾಸ್ ಅವರಿಗೆ ವಿಶ್ವ ಚಿನ್ನಾಭರಣ ಒಕ್ಕೂಟವು ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಜೈಪುರದಲ್ಲಿ ಈಚೆಗೆ ನಡೆದ ಸಮಾವೇಶದಲ್ಲಿ ಜೋಯ್ ಅಲುಕ್ಕಾಸ್ ಅವರ ಪರವಾಗಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಜಾನ್ ಪಾಲ್ ಅಲುಕ್ಕಾಸ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ‘ಜೋಯಾಲುಕ್ಕಾಸ್ ತಂಡದ ಕಠಿಣ ಪರಿಶ್ರಮಕ್ಕೆ ಸಂದ ಪ್ರತಿಫಲ ಇದಾಗಿದೆ’ ಎಂದು ಸಮೂಹದ ಅಧ್ಯಕ್ಷ ಜೋಯ್ ಅಲುಕ್ಕಾಸ್ ಪ್ರತಿಕ್ರಿಯೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.