ADVERTISEMENT

ದೇಗುಲಗಳಲ್ಲಿ ನವರಾತ್ರಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2018, 12:21 IST
Last Updated 10 ಅಕ್ಟೋಬರ್ 2018, 12:21 IST
ಹೊಸಪೇಟೆಯ ಅಮರಾವತಿ ಬನ್ನಿಮಹಾಂಕಾಳಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಬುಧವಾರ ದೇವಿಗೆ ವಿಶೇಷ ಪುಷ್ಪಲಂಕಾರ ಮಾಡಿ ಬೆಳ್ಳಿ ಕವಚ ತೊಡಿಸಲಾಯಿತು
ಹೊಸಪೇಟೆಯ ಅಮರಾವತಿ ಬನ್ನಿಮಹಾಂಕಾಳಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಬುಧವಾರ ದೇವಿಗೆ ವಿಶೇಷ ಪುಷ್ಪಲಂಕಾರ ಮಾಡಿ ಬೆಳ್ಳಿ ಕವಚ ತೊಡಿಸಲಾಯಿತು   

ಹೊಸಪೇಟೆ: ನವರಾತ್ರಿ ಉತ್ಸವದ ಅಂಗವಾಗಿ ನಗರ ಹಾಗೂ ತಾಲ್ಲೂಕಿನ ವಿವಿಧ ದೇವಸ್ಥಾನಗಳಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ನಗರದ ಅಮರಾವತಿಯ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ರುದ್ರಾಭಿಷೇಕ, ಪುಷ್ಪಲಂಕಾರ, ಪಂಚಾಮೃತ ನೈವೇದ್ಯ ಸಮರ್ಪಿಸಲಾಯಿತು. ಇದೇ 19ರ ವರೆಗೆ ನಿತ್ಯ ಬೆಳಿಗ್ಗೆ 5ಕ್ಕೆ ರುದ್ರಾಭಿಷೇಕ ನಡೆಯುತ್ತದೆ. 19ರಂದು ಸಂಜೆ 4ಕ್ಕೆ ಚಂದ್ರಮೌಳೇಶ್ವರ ಸ್ವಾಮಿ ಉತ್ಸವಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇಟ್ಟು ಅಮ್ಮನ ದೇವಸ್ಥಾನಕ್ಕೆ ತರಲಾಗುತ್ತದೆ. ನಂತರ ಬನ್ನಿ ಮುಡಿಯಲಾಗುತ್ತದೆ.

ಹೊಸಪೇಟೆ ಕಲ್ಚರಲ್‌ ಅಸೋಸಿಯೇಸನ್‌ನಿಂದ ಟೌನ್‌ ರೀಡಿಂಗ್‌ ರೂಂನಲ್ಲಿ ಬುಧವಾರ ಬೆಳಿಗ್ಗೆ ವಿಶೇಷ ಪೂಜೆ ನಡೆಯಿತು. ಸಪ್ತಗಿರಿ ಶ್ರೀನಿವಾಸ ಸೇವಾ ಟ್ರಸ್ಟ್‌ನಿಂದ ಅಮರಾವತಿಯ ವೆಂಕಟೇಶ್ವರ ದೇಗುಲದಲ್ಲಿ ನವರಾತ್ರಿ ಉತ್ಸವ ಆಚರಿಸಲಾಯಿತು.

ADVERTISEMENT

ತಾಲ್ಲೂಕಿನ ವೆಂಕಟಾಪುರ ಕ್ಯಾಂಪಿನ ಗುಡ್ಡದ ತಿಮ್ಮಪ್ಪ ದೇಗುಲದಲ್ಲಿ ಗೋಪೂಜೆ, ಕಲಶಪೂಜೆ, ಗಣಪತಿ ಹೋಮ ನಡೆಯಿತು. ತಾಲ್ಲೂಕಿನ ಹೊಸೂರಿನಲ್ಲಿ ಹೊಸೂರಮ್ಮ ದೇವಿಗೆ ವಿಶೇಷ ರೀತಿಯಲ್ಲಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.