ಸಿರವಾರ (ರಾಯಚೂರು ಜಿಲ್ಲೆ): ವೇಗವಾಗಿ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರಣ ಇಬ್ಬರು ಮೃತಪಟ್ಟ ಘಟನೆ ನೀಲಗಲ್ ಗ್ರಾಮದ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.
ಹುಲಿಗೆಮ್ಮ (56) ಸ್ಥಳದಲ್ಲಿಯೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಪ್ರಭು (26) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾ ಅಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದವರು ರಾಯಚೂರು ಸಮೀಪದ ಹೊಸೂರು ಗ್ರಾಮದಿಂದ ದೇವದುರ್ಗಕ್ಕೆ ಶವಸಂಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರೆಂದು ಗೊತ್ತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.