ಬೇಲೂರು: `ಪಾಲಕರು ಮಕ್ಕಳ ಶಿಕ್ಷಣಕ್ಕೆ ನೀಡುತ್ತಿರುವ ಒತ್ತು-ಆಸಕ್ತಿಯನ್ನು ಮಕ್ಕಳ ಕ್ರೀಡಾ ಕ್ಷೇತ್ರಕ್ಕೆ ನೀಡುತ್ತಿಲ್ಲ~ ಎಂದು ಶಾಸಕ ವೈ.ಎನ್.ರುದ್ರೇಶ್ಗೌಡ ಬೇಸರ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಪಟ್ಟಣದಲ್ಲಿ ಶನಿವಾರ ಏರ್ಪಡಿಸಿದ್ದ 14 ರಿಂದ17 ವಯೋಮಿತಿಯೊಳಗಿನ ಬಾಲಕ, ಬಾಲಕಿಯರ ಮೈಸೂರು ವಿಭಾಗ ಮಟ್ಟದ ಥ್ರೋಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಜಿ.ಪಂ. ಸದಸ್ಯರಾದ ಅಮಿತ್ ಕುಮಾರ್ಶೆಟ್ಟಿ, ಬಿ.ಜಯಶೀಲ, ಎಂ.ವಿ.ಹೇಮಾವತಿ, ತಾ.ಪಂ. ಅಧ್ಯಕ್ಷೆ ಕಮಲ ಚನ್ನಪ್ಪ, ಉಪಾಧ್ಯಕ್ಷ ಜೆ.ಸಿ.ಮೋಹನ್ ಕುಮಾರ್, ಪುರಸಭೆ ಉಪಾಧ್ಯಕ್ಷೆ ನಾಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಪ್ರಕಾಶ್, ದೈಹಿಕ ಶಿಕ್ಷಣ ಪರಿವೀಕ್ಷಕ ರಂಗಸ್ವಾಮಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.