ADVERTISEMENT

ಗಣಿ ಧಣಿಗಳಿಗೆ ಬಿಸಿ: ವರ್ಗಕ್ಕೆ ಹೆಚ್ಚಿದ ಒತ್ತಡ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2011, 19:35 IST
Last Updated 14 ಸೆಪ್ಟೆಂಬರ್ 2011, 19:35 IST

ಬೆಂಗಳೂರು: ಗಣಿ ಧಣಿಗಳಿಗೆ ಬಿಸಿ ಮುಟ್ಟಿಸಿರುವ ಬಳ್ಳಾರಿ ಜಿಲ್ಲಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ ಅವರ ವರ್ಗಾ ವಣೆಗೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.

`ರಾಜಕೀಯ ವಿರೋಧಿಗಳಿ ಗಿಂತಲೂ ಈ ಅಧಿಕಾರಿಗಳು ಹೆಚ್ಚು ಅಪಾಯಕಾರಿ. ಹೀಗಾಗಿ ಅವರನ್ನು ಮೊದಲು ಎತ್ತಂಗಡಿ ಮಾಡಿ~ ಎನ್ನುವ ಬೇಡಿಕೆ ಬಿಜೆಪಿಯ ಗಣಿ ಧಣಿಗಳಿಂದ ಬಂದಿದೆ.

ಒತ್ತಡ ಹೆಚ್ಚಾಗುವ ವೇಳೆಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ಬಂಧಿಸಿದೆ. 

ಆ ನಂತರ ಮಾಜಿ ಸಚಿವ ಶ್ರೀರಾಮುಲು ಈ ಅಧಿಕಾರಿಗಳ ಎತ್ತಂಗಡಿಗೆ ಪಟ್ಟು ಹಿಡಿದಿದ್ದು, ಅವರನ್ನು ವರ್ಗಾವಣೆ ಮಾಡದಿದ್ದರೆ ಬಿಜೆಪಿಗೆ ವಿದಾಯ ಹೇಳುವ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.