
ಪ್ರಜಾವಾಣಿ ವಾರ್ತೆಚಿಕ್ಕಮಗಳೂರು:  ನಗರದಲ್ಲಿ ಇತ್ತೀಚೆಗೆ ಉದ್ವಿಗ್ನ ವಾತಾವರಣ ಸೃಷ್ಟಿಗೆ ಕಾರಣವಾಗಿದ್ದ ಗೋವಧೆ ಮಾಡುವ ಅಕ್ರಮ ಕಸಾಯಿಖಾನೆಗಳ ಮೇಲೆ ನಗರಸಭೆ ಸಿಬ್ಬಂದಿ, ನಗರ ಠಾಣೆ ಮತ್ತು ಬಸವನಹಳ್ಳಿ ಠಾಣೆ ಪೊಲೀಸರು ಬುಧವಾರ ಜಂಟಿ ದಾಳಿ ನಡೆಸಿ ಐವರನ್ನು ಬಂಧಿಸಿದರು.
ಜಾಗೃತ ದಳ: ನಗರದಲ್ಲಿ ಅಕ್ರಮ ಗೋಮಾಂಸ ಮಾರಾಟ ತಡೆಗೆ ನಗರಸಭೆ ಮತ್ತು ಪೊಲೀಸ್ ಸಿಬ್ಬಂದಿಯ ಜಾಗೃತ ದಳ ರಚಿಸಲಾಗಿದ್ದು, 20ಕ್ಕೂ ಅಧಿಕ ಅನಧಿಕೃತ ಗೋಮಾಂಸ ಮಾರಾಟ ಮಳಿಗೆಗಳ ಮೇಲೆ ಬುಧವಾರ ದಾಳಿ ನಡೆಸಿ ಬೀಗಮುದ್ರೆ ಹಾಕಲಾಗಿದೆ. ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ನಗರ ಠಾಣೆಗೆ ದೂರು ನೀಡಲಾಗಿದೆ ಎಂದು ಆಯುಕ್ತ ಕೃಷ್ಣಮೂರ್ತಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.