ADVERTISEMENT

ಗೋ ಮಾಂಸ ಅಂಗಡಿಗೆ ದಾಳಿ ಯತ್ನ: ಬಜರಂಗ ದಳದ ಮೂವರಿಗೆ ಪೆಟ್ಟು

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2011, 18:45 IST
Last Updated 14 ಮಾರ್ಚ್ 2011, 18:45 IST

ಚಿಕ್ಕಮಗಳೂರು: ನಗರದ ಅಂಡೆಛತ್ರ ಸಮೀಪದ ಮಹಮದ್‌ಖಾನ್ ಗಲ್ಲಿಯಲ್ಲಿ ಗೋ ಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಬಜರಂಗ ದಳ ಕಾರ್ಯಕರ್ತರು ಎರಡು ಮಳಿಗೆಗಳ ಮೇಲೆ ಸೋಮವಾರ ದಾಳಿ ನಡೆಸಲು ಯತ್ನಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರು ಹಲ್ಲೆ ನಡೆಸಿದ್ದರಿಂದ ಬಜರಂಗ ದಳದ ಕಾರ್ಯಕರ್ತರಾದ ರಘು, ಶಾಂತಿ ಮತ್ತು ಪುರುಷೋತ್ತಮ್ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣದಲ್ಲಿ ಬಜರಂಗದಳ ಕಾರ್ಯಕರ್ತ ಶಾಂತಿ ಎಂಬಾತನ ತಲೆ ಮತ್ತು ಮೈಕೈಗೆ ಪೆಟ್ಟಾಗಿದೆ. ಉಳಿದಿಬ್ಬರಿಗೆ ಸಣ್ಣ ಗಾಯವಾಗಿದೆ.

ಬೆಂಕಿ-ಅಂಗಡಿಗೆ ಹಾನಿ: ಇದೇ ವೇಳೆ, ಫೈರೋಜ್ ಮತ್ತು ಅಮ್ಜದ್ ಮಾಲೀಕತ್ವದ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಭಾಗಶಃ ಸುಟ್ಟುಹೋಗಿವೆ. ಒಂದು ಬೈಸಿಕಲ್ ಸಹ ಹಾನಿಗೊಂಡಿದೆ. ತಕ್ಷಣ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.