ADVERTISEMENT

‘ಜನಸಾಮಾನ್ಯರಿಗೆ ನಿರಾಸೆ ತಂದ ಮೋಡಿ ಆಡಳಿತ’

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2017, 9:19 IST
Last Updated 10 ಡಿಸೆಂಬರ್ 2017, 9:19 IST
ಹಿರಿಯೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಾರತೀಯ ಕಮ್ಯುನಿಸ್ಟ್ ಪಕ್ಷದ ತಾಲ್ಲೂಕು ಮಟ್ಟದ ಸಮ್ಮೇಳನವನ್ನು ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಿ.ವೈ. ಶಿವರುದ್ರಪ್ಪ ಉದ್ಘಾಟಿಸಿದರು.
ಹಿರಿಯೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಾರತೀಯ ಕಮ್ಯುನಿಸ್ಟ್ ಪಕ್ಷದ ತಾಲ್ಲೂಕು ಮಟ್ಟದ ಸಮ್ಮೇಳನವನ್ನು ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಿ.ವೈ. ಶಿವರುದ್ರಪ್ಪ ಉದ್ಘಾಟಿಸಿದರು.   

ಹಿರಿಯೂರು: ಕೇಂದ್ರದಲ್ಲಿ ಪೂರ್ಣಪ್ರಮಾಣದ ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಜನರು ಭ್ರಮನಿರಸನಗೊಂಡಿದ್ದಾರೆ ಎಂದು ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಸಿ.ವೈ. ಶಿವರುದ್ರಪ್ಪ ಆರೋಪಿಸಿದರು.

ನಗರದ ಲಕ್ಷ್ಮಮ್ಮ ತಿಮ್ಮಯ್ಯ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಾರತೀಯ ಕಮ್ಯುನಿಸ್ಟ್ ಪಕ್ಷದ ತಾಲ್ಲೂಕು ಮಟ್ಟದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಪ್ರಧಾನಿಯವರು ಯಾವುದೇ ಶಾಶ್ವತ ಯೋಜನೆ ರೂಪಿಸದೆ ಭಾಷಣಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ. ನೋಟ್ ಅಮಾನ್ಯ ಹಾಗೂ ಜಿಎಸ್‌ಟಿ ಜಾರಿಯಿಂದ ಎಲ್ಲ ವರ್ಗದ ಜನ ಕೇಂದ್ರ ಸರ್ಕಾರದ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ. 2018 ರ ವಿಧಾನಸಭೆ ಮತ್ತು 2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮತಗಳು ಹಂಚಿ ಹೋಗದಂತೆ ತಡೆಯಲು ಕಾಂಗ್ರೆಸ್ ಹಾಗೂ ಎಡಪಕ್ಷಗಳು ವಿಶಾಲ ತಳಹದಿಯ ಮೇಲೆ ರಾಜಕೀಯ ವೇದಿಕೆ ನಿರ್ಮಿಸಿಕೊಳ್ಳಲಿವೆ ಎಂದು ಅವರು ಹೇಳಿದರು.

ADVERTISEMENT

ಸಿಪಿಐ 23 ನೇ ರಾಷ್ಟ್ರೀಯ ಸಮ್ಮೇಳನ 2018 ಏಪ್ರಿಲ್ ನಲ್ಲಿ ಕೇರಳದಲ್ಲಿ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ 2018 ಜನವರಿ 27 ಮತ್ತು 28 ರಂದು ದಾವಣಗೆರೆಯಲ್ಲಿ ಪಕ್ಷದ ರಾಜ್ಯ ಸಮ್ಮೇಳನ ನಡೆಸಲಾಗುವುದು ಎಂದು ಶಿವರುದ್ರಪ್ಪ ತಿಳಿಸಿದರು.

ಪಕ್ಷದ ತಾಲ್ಲೂಕು ಕಾರ್ಯದರ್ಶಿ ಎಸ್.ಸಿ. ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಜೈರಾಂರೆಡ್ಡಿ, ತಿಪ್ಪಮ್ಮ, ಸೌಭಾಗ್ಯಮ್ಮ, ಬಿ.ಪಿ. ನಿರ್ಮಲ, ಕೆ.ಟಿ. ಸುಜಾತ, ಎನ್. ಶ್ರೀನಿವಾಸ್, ಕೆ.ರಾಮಯ್ಯ, ನಳಿನಾಕ್ಷಿ ಮಾತನಾಡಿದರು. ರಂಗಸ್ವಾಮಿ, ಸಿದ್ದಗಂಗಮ್ಮ, ಸುಧಾ, ಚಿಂತಾಮಣಿ, ಚೂಡಾಮಣಿ, ಶೋಭ, ಕರಿಯಮ್ಮ, ಜಯಮ್ಮ, ಮಂಜುಳಾ, ಪುಟ್ಟಕೆಂಚಮ್ಮ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.