ADVERTISEMENT

ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿಗೆ ವೈದ್ಯಶ್ರೀ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2012, 18:40 IST
Last Updated 11 ನವೆಂಬರ್ 2012, 18:40 IST

ಗುಲ್ಬರ್ಗ: ನಗರದ ಡಾ. ಪಿ.ಎಸ್. ಶಂಕರ ವೈದ್ಯಶ್ರಿಪ್ರಶಸ್ತಿಗೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಡಾ. ಪಿ.ಎಸ್. ಶಂಕರ ಪ್ರತಿಷ್ಠಾನದ ಕಾರ್ಯದರ್ಶಿ ಎಸ್.ಎಸ್. ಹಿರೇಮಠ ತಿಳಿಸಿದ್ದಾರೆ.

ಬೆಂಗಳೂರಿನ ಜಯದೇವ ಹೃದ್ರೋಗ ಚಿಕಿತ್ಸೆ ಹಾಗೂ ಸಂಶೋಧನಾ ಸಂಸ್ಥೆಯ ಮಕ್ಕಳ ಹೃದ್ರೋಗ ಚಿಕಿತ್ಸಾ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿರುವ ಡಾ. ಬಾಳೇಕುಂದ್ರಿ ಅವರ ಅನುಪಮ ಸೇವೆ, ಅಧ್ಯಯನ, ಅಧ್ಯಾಪನ ಹಾಗೂ ಸಂಶೋಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ, ಫಲಕ ಹಾಗೂ ಸನ್ಮಾನ ಒಳಗೊಂಡಿರುತ್ತದೆ.
2013ರ ಜನವರಿ ಒಂದರಂದು ನಗರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.