ADVERTISEMENT

ಡಿವಿಎಸ್ ನಾಲಿಗೆಗೆ ಲಗಾಮು ಇರಲಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2012, 19:30 IST
Last Updated 12 ಆಗಸ್ಟ್ 2012, 19:30 IST

ರಾಯಚೂರು: ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರು `ನಾಲಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಶಾಸಕ ಕೆ.ಶಿವನಗೌಡ ನಾಯಕ ಎಚ್ಚರಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸದಾನಂದ ಗೌಡರು ಇಂಥ ಹೇಳಿಕೆ ನೀಡಿ ಸಣ್ಣತನವನ್ನು ಪ್ರದರ್ಶಿಸಿದ್ದಾರೆ. ಇದರಿಂದ ಪಕ್ಷದ ಮೇಲೆ ದುಷ್ಪರಿಣಾಮ ಬೀರುತ್ತದೆ. ರಾಜ್ಯದಲ್ಲಿ ವೀರಶೈವ ಸಮಾಜವು ಬಲಿಷ್ಠವಾದ ಸಮಾಜವಾಗಿದೆ. ಮಾಜಿ ಸಿ.ಎಂ.  ಯಡಿಯೂರಪ್ಪ  ಹಾಗೂ ಹಿರಿಯ ಮುಖಂಡ ಸದಾನಂದಗೌಡರ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.