
ಪ್ರಜಾವಾಣಿ ವಾರ್ತೆಮೈಸೂರು: ಹೆಸರಾಂತ ಕಾದಂಬರಿಕಾರ ತಳುಕಿನ ರಾಮಸ್ವಾಮಿ ಸುಬ್ಬರಾವ್ (ತ.ರಾ.ಸು) ಅವರ ಮೂರನೇ ಮಗ ಎಸ್.ಪ್ರದೀಪ್ಕುಮಾರ್ (46) ನಗರದ ಯಾದವಗಿರಿಯಲ್ಲಿ ತಾವು ವಾಸಿಸುತ್ತಿದ್ದ ಅಪಾರ್ಟ್ಮೆಂಟ್ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಅವಿವಾಹಿತರಾದ ಇವರು ಒಬ್ಬರೇ ವಾಸವಿದ್ದರು. 3 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದರೂ ಗೊತ್ತಾಗಿರಲಿಲ್ಲ. ಶವ ಕೊಳೆತು ವಾಸನೆ ಬಂದಾಗ ನೆರೆಹೊರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.