ಸಿದ್ದಾಪುರ: ತಾಯಿ ಹಾಗೂ ಮಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಇಲ್ಲಿಗೆ ಸಮೀಪದ (ಗುಹ್ಯ) ಕಕ್ಕಟ ಕಾಡುವಿನಲ್ಲಿ ನಡೆದಿದೆ.
ಕಕ್ಕಟ ಕಾಡುವಿನಲ್ಲಿ ನೆಲೆಸಿರುವ ಲಕ್ಷ್ಮಿ (65), ಇವರ ಮಗ ರಾಜು (35) ಆತ್ಮಹತ್ಯೆ ಮಾಡಿಕೊಂಡವರು. ಇವರು ಕೂಲಿ ಕಾರ್ಮಿಕರು.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಲಕ್ಷ್ಮಿ ಮಗಳು ಲತಾ ಅವರು ಸಿದ್ದಾಪುರ ಸಂತೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಯ ಅಡುಗೆ ಕೋಣೆಯಲ್ಲಿ ಇಬ್ಬರೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜು ಮಾನಸಿಕ ಅಸ್ವಸ್ಥ. ಈತನ ಸ್ಥಿತಿಯನ್ನು ಕಂಡು ಕೊರಗಿದ ತಾಯಿ ಜೀವನದಲ್ಲಿ ಜಿಗುಪ್ಸೆಗೊಂಡಿರುವುದು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ ಎಂದು ಸಿದ್ದಾಪುರ ಪೋಲಿಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.