ADVERTISEMENT

ದೇವನಹಳ್ಳಿ: ಹೋಮಿಯೋಪತಿ ಚಿಕಿತ್ಸಾ ಶಿಬಿರ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2011, 19:30 IST
Last Updated 20 ಮಾರ್ಚ್ 2011, 19:30 IST

 ದೇವನಹಳ್ಳಿ: ಹೋಮಿಯೋಪತಿ ಚಿಕಿತ್ಸೆಯಿಂದ ಎಲ್ಲಾ ರೋಗಗಳನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಹೋಮಿಯೋಪತಿ ವೈದ್ಯರಾದ ಅನುರಾಧ •ತಿಳಿಸಿದರು.ಇಲ್ಲಿನ ಲಯನ್ಸ್ ಭವನದಲ್ಲಿ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ಹಮ್ಮಿಕೊಂಡಿದ್ದ ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರೋಗಗಳನ್ನು ಗುಣಪಡಿಸಲು ಹಲವು ಚಿಕಿತ್ಸಾ ವಿಧಾನಗಳಿವೆ. ರೋಗಗಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ರೋಗದ ಲಕ್ಷಣಗಳು ಕಾಣಸಿಕೊಂಡಲ್ಲಿ ಪ್ರಾಥಮಿಕ ಹಂತದಲ್ಲೇ ತಜ್ಞ ವೈದ್ಯರ ಸಲಹೆ ಪಡೆಯುವುದು ಅವಶ್ಯ ಎಂದು ತಿಳಿಸಿದರು.

ಲಯನ್ಸ್ ಅಧ್ಯಕ್ಷ ವೈ.ಕೆ.ಚಂದ್ರಶೇಖರ್ ಅಧ್ಯಕ್ಷತೆವಹಿಸಿ ಮಾತನಾಡಿ, ಗ್ರಾಮೀಣ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ 60 ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ನಡೆಸಲಾಗಿದೆ. ಪ್ರತಿ ತಿಂಗಳ ಮೂರನೇ ಭಾನುವಾರ ಉಚಿತ ಹೋಮಿಯೋಪತಿ ಚಿಕಿತ್ಸೆ ನೀಡಲಾಗುತ್ತಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.

ಲಯನೆಸ್ ಅಧ್ಯಕ್ಷೆ ಗೋಮತಿ ರಮೇಶ್, ಮಾಜಿ ಅಧ್ಯಕ್ಷರಾದ ವೈ.ಸಿ.ಕೃಪಾಕರ್, ರಮೇಶ್, ಪಶುವೈದ್ಯ ಮುನಿವೆಂಕಟಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.