ADVERTISEMENT

ದೊಡ್ಡಬಳ್ಳಾಪುರದ ಬಳಿ ಅಪಘಾತ: ನಾಲ್ವರ ಸಾವು

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2012, 10:15 IST
Last Updated 25 ಏಪ್ರಿಲ್ 2012, 10:15 IST

ಬೆಂಗಳೂರು (ಪಿಟಿಐ): ದೊಡ್ಡಬಳ್ಳಾಪುರದ ಸಮೀಪ ಬುಧವಾರ ಆಟೋ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರೂ ಸೇರಿದಂತೆ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತಪಟ್ಟವರನ್ನು ನಯನ (28), ಅನುಸೂಯಮ್ಮ (30), ನರಸಿಂಹಮೂರ್ತಿ (30), ಹಾಗೂ ಮಂಗಮ್ಮ (45) ಎಂದು ಗುರುತಿಸಲಾಗಿದೆ.

ದುರ್ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.