ADVERTISEMENT

ನಾಗರಿಕ ಸೇವಾ ಕಾಯ್ದೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2012, 19:30 IST
Last Updated 1 ಮಾರ್ಚ್ 2012, 19:30 IST

ಔರಾದ್: `ಸರ್ಕಾರಿ ಕೆಲಸ ಆಗಲಿದೆ ಬಲು ಸುಲಭ~ ಎಂಬ ಘೋಷಣೆಯೊಂದಿಗೆ ತಾಲ್ಲೂಕಿನಲ್ಲಿ ಕರ್ನಾಟಕ ನಾಗರಿಕ ಸೇವೆಗಳ ಖಾತರಿ ಅಧಿನಿಯಮ-2011 ಗುರುವಾರದಿಂದ ಜಾರಿಗೆ ಬಂದಿದೆ.

ಇಲ್ಲಿಯ ಮಿನಿ ವಿಧಾನಸೌಧ ಪ್ರಾಂಗಣದಲ್ಲಿ ಉಸ್ತುವಾರಿ ಸಚಿವ ರೇವು ನಾಯಕ ಬೆಳಮಗಿ ದೀಪ ಬೆಳಗಿಸುವ ಮೂಲಕ ನೂತನ ಕಾಯ್ದೆ ಜಾರಿಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಖಾತರಿ ಕಾಯ್ದೆ ಜಾರಿಯಿಂದ ಜನಪ್ರತಿನಿಧಿಗಳ ಕೆಲಸದ ಭಾರ ಸ್ವಲ್ಪ ಕಡಿಮೆಯಾಗಲಿದೆ. ಈ ಯೋಜನೆ ಮೊದಲಿಗೆ ಜಿಲ್ಲೆಗೆ  ತರುವಲ್ಲಿ ಜಿಲ್ಲಾಧಿಕಾರಿ ಸಮೀರ್ ಶುಕ್ಲ ಮತ್ತು ಶಾಸಕ ಪ್ರಭು ಚವ್ಹಾಣ್ ಕಾರಣರು ಎಂದರು.

ಚರ್ಮ ನಿಗಮದ ಅಧ್ಯಕ್ಷ ರಾಜೇಂದ್ರ ವರ್ಮಾ, ಈ ಯೋಜನೆಯಿಂದ ಜನಸಾಮಾನ್ಯರಿಗೆ ತುಂಬ ಅನುಕೂಲವಾಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.