ADVERTISEMENT

ನಾಳೆ ಕೆಂಪೇಗೌಡ ಸೇವಾ ಸಂಘ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2011, 19:30 IST
Last Updated 20 ಮಾರ್ಚ್ 2011, 19:30 IST

ದೊಡ್ಡಬಳ್ಳಾಪುರ: ನಗರದಲ್ಲಿ ನೂತನವಾಗಿ ಆರಂಭಗೊಂಡಿರುವ ನಾಡಪ್ರಭು ಕೆಂಪೇಗೌಡ ಸೇವಾ ಸಂಘದ ಉದ್ಘಾಟನಾ ಸಮಾರಂಭ ಮಾ.22ರಂದು ಬೆಳೆಗ್ಗೆ 10.30 ಕ್ಕೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ.

ಆದಿ ಚುಂಚನಗಿರಿ ಶಾಖಾ ಮಠದ ಶ್ರೀನಿರ್ಮಲಾನಂದ ಸ್ವಾಮಿ ದಿವ್ಯಸಾನಿಧ್ಯ ವಹಿಸಲಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಆಧ್ಯಕ್ಷ ಬೊ.ಕೆಂಚಪ್ಪಗೌಡ ಉದ್ಘಾಟಿಸಲಿದ್ದಾರೆ. ಸಂಘದ ತಾಲ್ಲೂಕು ಅಧ್ಯಕ್ಷ ಎಚ್.ಚಂದ್ರಪ್ಪ, ನ್ಯಾಯವಾದಿ ಸಿ.ಎಚ್.ಹನುಮಂತರಾಯ, ತಾ.ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಕೃಷ್ಣಪ್ಪ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.