ADVERTISEMENT

ನೈಸ್ ಹೋರಾಟಗಾರನ ಕೊಲೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2011, 19:30 IST
Last Updated 18 ಅಕ್ಟೋಬರ್ 2011, 19:30 IST

ರಾಮನಗರ: ನೈಸ್ ಕಂಪೆನಿ ಬಿಎಂಐಸಿ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಸೋಮಪುರದ ನಿವಾಸಿ ಸಿದ್ದಲಿಂಗಪ್ರಭು (38) ಎಂಬಾತ ಕೊಲೆಯಾಗಿರುವ ಪ್ರಕರಣ ಮಂಗಳವಾರ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸೋಮವಾರ ರಾತ್ರಿ ಕೆಲ ದುಷ್ಕರ್ಮಿಗಳು ಲಾಂಗ್‌ನಿಂದ ಹೊಡೆದು ಸಿದ್ದಲಿಂಗಪ್ರಭುವನ್ನು ಕೊಂದು ಪರಾರಿಯಾಗಿದ್ದಾರೆ. ಈ ಕುರಿತು ಸಿದ್ದಲಿಂಗಪ್ರಭುವಿನ ಸಂಬಂಧಿ ಬಸಪ್ಪ ಎಂಬಾತರು ಠಾಣೆಯಲ್ಲಿ ದೂರು ನೀಡಿದ್ದಾರೆ. ನೈಸ್ ಕಂಪೆನಿಯ ಮುಖ್ಯಸ್ಥ ಅಶೋಕ ಖೇಣಿ ಹಾಗೂ ಬಿಜೆಪಿ ಮುಖಂಡ ರುದ್ರೇಶ್ ಅವರು ಈ ಕೊಲೆ ಮಾಡಿಸಿರುವ ಸಾಧ್ಯತೆ ಇದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT