ADVERTISEMENT

ಬೆಳಗಾವಿ ಪಾಲಿಕೆ:ಆಡಳಿತಾಧಿಕಾರಿ ನೇಮಕ ತಡೆಗೆ ಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 19 ಜನವರಿ 2012, 19:30 IST
Last Updated 19 ಜನವರಿ 2012, 19:30 IST

ಹುಬ್ಬಳ್ಳಿ:  ಬೆಳಗಾವಿ ನಗರ ಪಾಲಿಕೆಗೆ ಆಡಳಿತಾಧಿಕಾರಿ ನೇಮಕ ಮಾಡಿ ರುವುದಕ್ಕೆ ಮಧ್ಯಂತರ ತಡೆ ನೀಡಬೇಕೆಂಬ ಅರ್ಜಿಯನ್ನು ಹೈಕೋರ್ಟಿನ ಸಂಚಾರಿ ಪೀಠ ಗುರುವಾರ ತಿರಸ್ಕರಿಸಿತು.

ನ್ಯಾಯಮೂರ್ತಿ ಅಜಿತ್ ಗುಂಜಾಳ್ ಅವರ ಏಕಸದಸ್ಯ ಪೀಠವು, ಸಂಜೀವ್ ಪ್ರಭು ಮತ್ತು ದೀಪಕ್ ವಘೇಲಾ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿತು. ಬೆಳಗಾವಿ ನಗರ ಪಾಲಿಕೆಯ ಆಡಳಿತ ಮಂಡಳಿಯನ್ನು ಮುಂದುವರಿಸಬೇಕು ಹಾಗೂ ಆಡಳಿತಾಧಿಕಾರಿ ನೇಮಕಾತಿಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂಬುದಾಗಿ ಅರ್ಜಿದಾರರು ಮನವಿ ಮಾಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.