ಬೆಂಗಳೂರು: `ಅಖಿಲ ಭಾರತ ಬ್ಯಾಂಕ್ ಪಿಂಚಣಿದಾರರ ಸಮನ್ವಯ ಸಮಿತಿಯು ವಿವಿಧ ಬೇಡಿಗೆಗಳ ಕುರಿತು ಚರ್ಚಿಸಲು ರಾಷ್ಟ್ರೀಯ ಸಮಾವೇಶವನ್ನು ಸೋಮವಾರ (ಜೂನ್ 6) ರಂದು ನಗರದ ಪುರಭವನದಲ್ಲಿ ಹಮ್ಮಿಕೊಂಡಿದೆ~ ಎಂದು ಸಮಿತಿಯ ಅಧ್ಯಕ್ಷ ಶಾಂತರಾಜು ತಿಳಿಸಿದರು.
`ಸಮಾವೇಶದಲ್ಲಿ ದೇಶದ ಪ್ರಚಲಿತ ಆರ್ಥಿಕ ನೀತಿಗಳ ಬಗ್ಗೆ ಚರ್ಚಿಸಲಾಗುವುದು. ಬ್ಯಾಂಕಿಂಗ್ ಉದ್ಯಮದಲ್ಲಿ ಪಿಂಚಣಿದಾರರು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಪಿಂಚಣಿಯ ಹೆಚ್ಚಳ, ವೈದ್ಯಕೀಯ ಸೌಲಭ್ಯಗಳು ಈ ಬೇಡಿಕೆಗಳ ಕುರಿತು ಮುಖ್ಯವಾಗಿ ಸಮಾವೇಶದಲ್ಲಿ ಚರ್ಚಿಸಲಾಗುವುದು~ ಎಂದು ಹೇಳಿದರು.
ಸಮಾವೇಶವನ್ನು ಅಖಿಲ ಭಾರತ ಬ್ಯಾಂಕ್ ಅಧಿಕಾರಗಳ ಮಹಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಂಗಾತಿ ಜಿ.ಡಿ.ನದಾಫ್ ಉದ್ಘಾಟಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.