ADVERTISEMENT

ಮಣ್ಣು ಕುಸಿದು ಕಾರ್ಮಿಕರು ಬಲಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2012, 19:30 IST
Last Updated 4 ಫೆಬ್ರುವರಿ 2012, 19:30 IST

ಬಳ್ಳಾರಿ: ಮಣ್ಣಿನ ಗುಡ್ಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಡೂರು ತಾಲ್ಲೂಕಿನ ತೋರಣಗಲ್‌ನ ಜೆಎಸ್‌ಡಬ್ಲ್ಯೂ ಉಕ್ಕಿನ ಕಾರ್ಖಾನೆ ಆವರಣದಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಮೃತರನ್ನು ಗಾದಿಗನೂರು ಗ್ರಾಮದ ಹುಚ್ಚಪ್ಪ (28) ಹಾಗೂ ರೇವಣಸಿದ್ಧಯ್ಯ (30) ಎಂದು ಗುರುತಿಸಲಾಗಿದೆ. ಟ್ರ್ಯಾಕ್ಟರ್‌ಗೆ ಮಣ್ಣು ತುಂಬುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.