ಉಡುಪಿ: `ಕಲ್ಲಿದ್ದಲು ಆಧಾರಿತ ಉಡುಪಿ ಉಷ್ಣವಿದ್ಯುತ್ ಸ್ಥಾವರದ (ಯುಪಿಸಿಎಲ್) ಎರಡನೇ ಘಟಕದ ಆರಂಭಕ್ಕೆ ಇದುವರೆಗೂ ಸರ್ಕಾರದ ಅನುಮತಿ ಸಿಕ್ಕಿಲ್ಲ~ ಎಂದು ಜಿಲ್ಲಾಧಿಕಾರಿ ಎಂ.ಟಿ.ರೇಜು ತಿಳಿಸಿದರು.
ಪಟ್ಟಣದಲ್ಲಿ ಯುಪಿಸಿಎಲ್ ಸಂತ್ರಸ್ತರಿಂದ ಅಹವಾಲುಗಳನ್ನು ಆಲಿಸಲು ಸೋಮವಾರ ಕರೆದಿದ್ದ ತಜ್ಞರ ಸಮಿತಿ ಸಭೆ ಮುಂದೂಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ~ಮೊದಲ ಘಟಕದ ಅವಧಿ ಮಾರ್ಚ್ಗೆ ಮುಕ್ತಾಯವಾಗಿದೆ. ಅದರ ಮುಂದುವರಿಕೆಗಾಗಿ ಕಂಪೆನಿ ಈಗಾಗಲೇ ಅರ್ಜಿ ಸಲ್ಲಿಸಿದೆ~ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.