ADVERTISEMENT

ಯುವಜನೋತ್ಸವಕ್ಕೆ ಮಂಗಳೂರು ಆತಿಥ್ಯ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2011, 19:30 IST
Last Updated 23 ಸೆಪ್ಟೆಂಬರ್ 2011, 19:30 IST

ಮಂಗಳೂರು:  ಸ್ವಾಮಿ ವಿವೇಕಾನಂದ ಅವರ ಜನ್ಮ ದಿನ ಆಚರಣೆ ಪ್ರಯುಕ್ತ ಪ್ರತಿ ವರ್ಷ ನಡೆಯುವ ರಾಷ್ಟ್ರ ಮಟ್ಟದ ಯುವಜನೋತ್ಸವದ ಈ ಬಾರಿಯ ಆತಿಥ್ಯದ ಅವಕಾಶ ಮಂಗಳೂರಿಗೆ ದಕ್ಕಿದೆ.

ಜನವರಿ 12ರಿಂದ ಆರಂಭವಾಗುವ ಐದು ದಿನಗಳ ಉತ್ಸವವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಉದ್ಘಾಟಿಸಲಿದ್ದಾರೆ. ನಗರದ 10 ಕಡೆಗಳಲ್ಲಿ 5 ಸಾವಿರ ಯುವ ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎನ್.ಎಸ್.ಚನ್ನಪ್ಪ ಗೌಡ ಶುಕ್ರವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.