ನಾಗಮಂಗಲ: ಯುವಜನ ಮೇಳ ಗಳು ಕೇವಲ ಸ್ಪರ್ಧೆಗೆ ಮಾತ್ರ ಸೀಮಿತ ವಾಗದೆ, ಪ್ರಸಕ್ತ ವ್ಯವಸ್ಥೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಯುವಕರು ಚಿಂತಿಸುವಂತೆ ಮಾಡುವ ವೇದಿಕೆ ಗಳಾಗಬೇಕು ಎಂದು ಮಂಡ್ಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಶಿವಣ್ಣ ನುಡಿದರು.
ಪಟ್ಟಣದ ಟಿ.ಬಿ. ಬಡಾವಣೆಯ ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಯುವಜನ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಯುವಜನ ಮೇಳಗಳು ನಾಡಿನ ಯುವ ಸಮೂಹವನ್ನು ಸುಶಿಕ್ಷಿತರ ನ್ನಾಗಿ ಮಾಡಬೇಕು. ಯುವ ಪೀಳಿಗೆ ಸೋಮಾರಿಗಳಾಗದೆ ದುಡಿಯುವ ಮನೋಭಾವ ಮೈಗೂಡಿಸಿ ಕೊಳ್ಳ ಬೇಕು. ಅಂತಹ ಚಿಂತನೆಗಳನ್ನು ಜಾಗೃತ ಗೊಳಿಸುವ ವೇದಿಕೆ ಕಲ್ಪಿಸಬೇಕು ಎಂದರು.
ತಹಶೀಲ್ದಾರ್ ಜಗದೀಶ್ ಮಾತನಾಡಿ, ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯದ ಕೊರತೆಯಿದೆ. ತಂದೆ, ತಾಯಿ, ರಾಷ್ಟ್ರದ ಮೇಲೆ ಗೌರವ ಭಾವನೆ ಮೂಡಿಸಬೇಕಾದ ಅನಿ ವಾ ರ್ಯತೆ ಎದುರಾಗಿದೆ. ಯುವ ಕರನ್ನು ಸದ್ವಿಚಾರಕ್ಕೆ ತೆರೆದು ಕೊಳ್ಳು ವಂತೆ ಮಾಡಲು ಯುವಜನ ಮೇಳ ಗಳು ಇಂದು ಅವಶ್ಯಕವಾಗಿವೆ ಎಂದು ಹೇಳಿದರು.
ನಾಗಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ.ಸಿ.ಕೃಷ್ಣ, ಪಟ್ಟಣ ಪಂಚಾಯಿತಿ ಸದಸ್ಯ ಗೋಪಾಲ್, ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ವೇದಮೂರ್ತಿ, ಬೆಳ್ಳೂರಿನ ಮುಖಂಡ ಧರಣೇಂದ್ರ ಬಾಬು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.