ADVERTISEMENT

ಸಹಕಾರ ಕ್ಷೇತ್ರಕ್ಕೆ ವಿಶ್ವಾಸವೇ ಆಧಾರ

​ಪ್ರಜಾವಾಣಿ ವಾರ್ತೆ
Published 2 ಜನವರಿ 2012, 19:30 IST
Last Updated 2 ಜನವರಿ 2012, 19:30 IST

ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ಪ್ರೀತಿ, ವಿಶ್ವಾಸ, ನಂಬಿಕೆ ಇದ್ದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅಭಿಪ್ರಾಯಪಟ್ಟರು.

ನಗರದ ಬಾಲರಾಜ್ ಅರಸ್ ರಸ್ತೆಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ `ಸಿ~ ಬ್ಲಾಕ್ ಕಟ್ಟಡದ 2ನೇ ಮಹಡಿಯ 11 ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ ಮತ್ತು  ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಮಾತನಾಡಿದರು. ಜಿಲ್ಲಾ ಸರ್ಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷ ಡಿ.ಆರ್. ಪುಟ್ಟಪ್ಪ ಅಧ್ಯಕ್ಷತೆ ವಹಿಸಿದ್ದರು.
 
ಪ್ರೇಮಾ ಪ್ರಾಸ್ತಾವಿಕ ಮಾತನಾಡಿದರು.ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಘುರಾಮ್ ದೇವಾಡಿಗ, ಸಹಕಾರ ಸಂಘಗಳ ಉಪ ನಿಬಂಧಕ ಅಶೋಕ್ ವಿ.ಮೊರಾಬ್, ಎ.ಎಸ್. ಜಯಪ್ಪ, ಶಾಂತಕುಮಾರ್ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.