ADVERTISEMENT

ಸಹಜ ಸ್ಥಿತಿಗೆ ಜನಜೀವನ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2011, 19:30 IST
Last Updated 12 ಸೆಪ್ಟೆಂಬರ್ 2011, 19:30 IST

ಬೆಳಗಾವಿ: ಜಿಲ್ಲೆಯ ಒಂದು ಸೇತುವೆ ಹೊರತುಪಡಿಸಿ ಉಳಿದೆಲ್ಲ ಸೇತುವೆಗಳು ಸೋಮವಾರ ಸಂಚಾರಕ್ಕೆ ಮುಕ್ತವಾಗಿವೆ. ನದಿಗಳ ನೀರು ಹರಿವಿನಲ್ಲಿ ಗಣನೀಯ ಇಳಿಕೆಯಾಗಿದೆ.

ಚಿಕ್ಕೋಡಿ ತಾಲ್ಲೂಕಿನ ಎರಡು ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿದ್ದರೆ, ಗೋಕಾಕ ತಾಲ್ಲೂಕಿನ ದೂಪದಾಳ-ಕೊಣ್ಣೂರು ಸೇತುವೆ ಮಾತ್ರ ನೀರಿನಲ್ಲಿ ಮುಳುಗಿದೆ.

 ಘಟಪ್ರಭಾ ಅಣೆಕಟ್ಟಿನಿಂದ 6,803 ಹಾಗೂ ಮಲಪ್ರಭಾದಿಂದ 4,018 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

ಚಿಕ್ಕೋಡಿ ವರದಿ: ಕೃಷ್ಣಾ ನದಿ ಪ್ರವಾಹದಲ್ಲಿ ಮುಳುಗಡೆಯಾಗಿದ್ದ ತಾಲ್ಲೂಕಿನ ಕಲ್ಲೋಳ-ಯಡೂರ, ಸದಲಗಾ-ಜನವಾಡ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ಜನ ಜೀವನ ಸಹಜಸ್ಥಿತಿಗೆ ಮರಳಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.