ADVERTISEMENT

ಸಾಲ: ವಿಷ ಸೇವಿಸಿ ರೈತನ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2011, 19:30 IST
Last Updated 9 ಸೆಪ್ಟೆಂಬರ್ 2011, 19:30 IST

ಸಾಗರ: ತಾಲ್ಲೂಕಿನ ಆನಂದಪುರಂ ಬಳಿಯ ಇರುವಕ್ಕಿ ಗ್ರಾಮದಲ್ಲಿ ಮಂಜಪ್ಪ (40) ಎಂಬ ರೈತ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲ ಕಾಣದೆ ಮಂಜಪ್ಪ ಮೃತಪಟ್ಟಿದ್ದಾರೆ.

ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದ ಅವರು ಕೃಷಿಗಾಗಿ ಹಲವು ವ್ಯಕ್ತಿಗಳಿಂದ ಕೈಸಾಲ ಪಡೆದಿದ್ದರು ಎನ್ನಲಾಗಿದೆ. ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.