ADVERTISEMENT

ಸಿಂದಗೇರಿಯಲ್ಲಿ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2012, 19:30 IST
Last Updated 19 ಜುಲೈ 2012, 19:30 IST

ವಿಜಾಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಸಿಂದಗೇರಿ ಗ್ರಾಮದಲ್ಲಿ ಬಸವರಾಜ ಭೀಮರಾಯ ಚನ್ನಪಟ್ಟಣ (45) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ.

ಇವರು ಸಾಗುವಳಿಗಾಗಿ ಸಿಂಡಿಕೇಟ್ ಬ್ಯಾಂಕ್‌ನ ಯಾಳವಾರ ಶಾಖೆಯಲ್ಲಿ ರೂ 50,000, ಶರಣ ಸೋಮನಾಳದ ಪಿಕೆಪಿಎಸ್ ಬ್ಯಾಂಕ್‌ನಲ್ಲಿ ರೂ 35,000 ಸಾಲ ಮಾಡಿದ್ದರು. ಅಲ್ಲದೆ ಗ್ರಾಮದಲ್ಲಿ ಮೂರು ಲಕ್ಷ  ರೂಪಾಯಿ ಕೈ ಸಾಲ ಮಾಡಿದ್ದರು. ಸಕಾಲಕ್ಕೆ ಮಳೆ ಬಾರದೆ ಯಾವುದೇ ಬೆಳೆ ಬೆಳೆಯಲಿಲ್ಲ.

ಸಾಲ ತೀರಿಸುವುದು ಹೇಗೆ ಎಂದು ಹೆದರಿ ಸಿಂದಗೇರಿಯ ಪಾಳು ಬಿದ್ದ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಬಸವನ ಬಾಗೇವಾಡಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.