ADVERTISEMENT

ಸಿಎಂ ರಾಜೀನಾಮೆಗೆ ಸಿಪಿಐಎಂ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಜನವರಿ 2011, 19:30 IST
Last Updated 24 ಜನವರಿ 2011, 19:30 IST

ಕೋಲಾರ: ಹಲವಾರು ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಿಪಿಐಎಂ ಕಾರ್ಯಕರ್ತರು ನಗರದ ಗಾಂಧಿವನದಲ್ಲಿ ಸೋಮವಾರ ಧರಣಿ ನಡೆಸಿದರು.

ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದರಿಂದ ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿಬೇಕು ಎಂದು ಆಗ್ರಹಿಸಿದರು. ದೂರು ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಬಿಜೆಪಿ ಬಂದ್ ನಡೆಸಿರುವುದು ಜನರ ಗಮನ ಬೇರೆಡೆ ಸೆಳೆಯುವ ತಂತ್ರ ಎಂದು ದೂರಿದರು.ಮುಖಂಡರಾದ ಪಿ.ಆರ್.ಸೂರ್ಯನಾರಾಯಣ, ಜಿ.ಅರ್ಜುನನ್, ಸಂಪಂಗಿ, ಗಾಂಧಿನಗರ ನಾರಾಯಣಸ್ವಾಮಿ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.