ADVERTISEMENT

ಹೂಗಾರ ಸಮಾಜಕ್ಕೆ 2ಎ ಪ್ರಮಾಣಪತ್ರ - ಮುಖ್ಯಮಂತ್ರಿ ಭರವಸೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2012, 19:30 IST
Last Updated 4 ನವೆಂಬರ್ 2012, 19:30 IST
ಹೂಗಾರ ಸಮಾಜಕ್ಕೆ 2ಎ ಪ್ರಮಾಣಪತ್ರ - ಮುಖ್ಯಮಂತ್ರಿ ಭರವಸೆ
ಹೂಗಾರ ಸಮಾಜಕ್ಕೆ 2ಎ ಪ್ರಮಾಣಪತ್ರ - ಮುಖ್ಯಮಂತ್ರಿ ಭರವಸೆ   

ಹುಬ್ಬಳ್ಳಿ: `ಹೂಗಾರ ಸಮಾಜದವರಿಗೆ `2ಎ~ ಪ್ರಮಾಣಪತ್ರ ನೀಡಲು ಇರುವ ಕಾನೂನು ತೊಡಕುಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಇಲ್ಲಿ ಭರವಸೆ ನೀಡಿದರು.

ಇಲ್ಲಿನ ನೆಹರೂ ಮೈದಾನದಲ್ಲಿ ಏರ್ಪಡಿಸಿದ್ದ ಹೂಗಾರ ಸಮಾಜದ ರಾಜ್ಯ ಮಟ್ಟದ ಪ್ರಥಮ ಸಮಾವೇಶ ಉದ್ಘಾಟಿಸಿದ ಅವರು, ಈ ಸಮುದಾಯದವರಿಗೆ  ಬಡ್ಡಿ ರಹಿತ ಸಾಲ ನೀಡಿಕೆ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳನ್ನು ನೀಡಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

`ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಅವರು ತಮ್ಮ ಕಾಲಿನ ಮೇಲೆ ನಿಂತುಕೊಳ್ಳಲು ಸಾಧ್ಯ. ಕೇವಲ ಸರ್ಕಾರದಿಂದ ಜನರ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಾಗಿ ಸಾಲ ಮಾಡಿಯಾದರೂ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದರು.

ಲಿಂಗಾಯತ ಸಮುದಾಯದ ಅವಿಭಾಜ್ಯ ಅಂಗವಾಗಿರುವ ಹೂಗಾರ ಸಮಾಜಕ್ಕೆ ಈವರೆಗೂ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಸಂಘಟಿತರಾಗದಿದ್ದರೆ ನಿಮ್ಮ ಕೂಗು ಯಾವ ಸರ್ಕಾರಕ್ಕೂ ಕೇಳುವುದಿಲ್ಲ. ಮೊದಲು ಸಂಘಟಿತರಾಗಿ ಎಂದು ಕಿವಿಮಾತು ಹೇಳಿದರು.

ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಹಾಗೂ ಜ್ಞಾನೇಶ್ವರ ವಿಷ್ಣು ಮಹಾರಾಜ ಸಾನ್ನಿಧ್ಯ ವಹಿಸಿದ್ದರು. ಇದಕ್ಕೂ ಮುನ್ನ ಶರಣ ಮಾದಯ್ಯನವರ ಭಾವಚಿತ್ರದ ಮೆರವಣಿಗೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.