ADVERTISEMENT

23ರಂದು ರಂಗ ಗೀತೋತ್ಸವ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2011, 19:30 IST
Last Updated 20 ಅಕ್ಟೋಬರ್ 2011, 19:30 IST

ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಸಾಸಲಾಪುರ ಗ್ರಾಮದ ಕನ್ನಡ ಗೆಳೆಯರ ಬಳಗ ವತಿಯಿಂದ 23ರಂದು ಬೆಳಿಗ್ಗೆ 11 ಗಂಟೆಗೆ `ರಂಗ ಗೀತೋತ್ಸವ, ಕವಿಗೋಷ್ಠಿ ಹಾಗು ಗೀತಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾತನೂರು ಸಂತೆಮಾಳದ ಮಹದೇಶ್ವರ ದೇವಸ್ಥಾನ ಸಮುದಾಯ ಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ನಿವೃತ್ತ ಕೃಷಿ ಅಧಿಕಾರಿ ರಂಗಸ್ವಾಮಿವಹಿಸಲಿದ್ದಾರೆ. ಸಾತನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ್ ಉದ್ಘಾಟಿಸಲಿದ್ದಾರೆ.
 
ಸಾಹಿತಿ ರಾಮಲಿಂಗೇಶ್ವರ (ಸಿಸಿರಾ), ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಟಿ.ಚಿಕ್ಕಪುಟ್ಟೇಗೌಡ, ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ಲೇಗೌಡ ಬೆಸಗರಹಳ್ಳಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.  ಮರಳವಾಡಿ ಉಮಾಶಂಕರ್, ಶಿವಲಿಂಗಯ್ಯ, ಕಾ.ಪ್ರಕಾಶ್, ಕೂಗಿ ಗಿರಿಯಪ್ಪ, ಚಿಕ್ಕಮರೀಗೌಡ, ಸಿ.ಚಲುವರಾಜು,  ಇತರರು ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.