ADVERTISEMENT

3 ಲಾರಿ ಲೋಡ್ ಮರಳು ವಶ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2012, 19:30 IST
Last Updated 13 ಏಪ್ರಿಲ್ 2012, 19:30 IST

ಶ್ರೀರಂಗಪಟ್ಟಣ:  ತಾಲ್ಲೂಕಿನ ಕೆಆರ್‌ಎಸ್‌ನ ಹೊಸ ಸೇತುವೆ ಮತ್ತು ಹೊಂಗಹಳ್ಳಿಯ ಪಂಪ್‌ಹೌಸ್ ಬಳಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಸ್ಥಳಕ್ಕೆ ತಹಶೀಲ್ದಾರ್ ಅರುಳ್‌ಕುಮಾರ್ ಶುಕ್ರವಾರ ದಿಢೀರ್ ದಾಳಿ ನಡೆಸಿದ್ದು, ಸುಮಾರು 3 ಲಾರಿ ಲೋಡ್ ಮರಳನ್ನು ವಶಪಡಿಸಿಕೊಂಡಿದ್ದಾರೆ.

  ಕೆಆರ್‌ಎಸ್‌ನಿಂದ ಕಟ್ಟೇರಿ ಕಡೆಗೆ ಸಂಪರ್ಕ ಕಲ್ಪಿಸುವ ಹೊಸ ಸೇತುವೆಯ ಕೆಳಗೆ, ಕಾವೇರಿ ನದಿಯಲ್ಲಿ ಹಲವು ದಿನಗಳಿಂದ ಅಕ್ರಮ ಮರಳು ದಂಧೆ ನಡೆಯುವ ಬಗ್ಗೆ ಸಿಕ್ಕ ಸುಳಿವು ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದರು. ಅಧಿಕಾರಿಗಳು ಬರುತ್ತಿದ್ದಂತೆಯೇ ಮರಳು ಎತ್ತುವಳಿ ಮಾಡುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ. ಹೊಂಗಹಳ್ಳಿ ಪಂಪ್‌ಹೌಸ್ ಬಳಿ ಕೂಡ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ದೂರುಗಳ ಬಂದ ಹಿನ್ನೆಲೆಯಲ್ಲಿ ಅಲ್ಲಿಗೂ ಅಧಿಕಾರಿಗಳು ಭೇಟಿ ನೀಡಿ ಸುಮಾರು ಎರಡು ಲಾರಿ ಲೋಡ್ ಮರಳು ವಶಪಡಿಸಿಕೊಂಡಿದ್ದಾರೆ.

ಹರಾಜು ಮಾಡಲಾಗುತ್ತದೆ. ತಾಲ್ಲೂಕಿನ ಮಹದೇವಪುರ ಬಳಿ ಕಾವೇರಿ ನದಿಯಲ್ಲಿ ಹರಿಗೋಲು ಬಳಸಿ ಮರಳು ಎತ್ತುವ ಬಗ್ಗೆ ದೂರುಗಳು ಬಂದಿವೆ. ಒಂದೆರಡು ದಿನಗಳಲ್ಲಿ ಅಲ್ಲಿಗೂ ತೆರಳಿ ಪರಿಶೀಲಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು. ಅಕ್ರಮ ಮರಳು ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಕೆಆರ್‌ಎಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರೀತಂ ಶ್ರೇಯಕರ್, ಕಂದಾಯ ನಿರೀಕ್ಷ ಪ್ರಸನ್ನಕುಮಾರ್ ಜತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.